ಆತ್ಮ ಯೋಜನೆ: ಉಪಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ನ್ಯೂಸ್24.ಕಾಂ|JOB Junction
ಆತ್ಮ ಯೋಜನೆ(Atama Yojana)ಯಡಿ ಕೃಷಿ ಇಲಾಖೆಯ ಕಚೇರಿಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರಿತ ಉಪಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
READ|ಪಡಿತರ ಅಕ್ಕಿ ಬಹಿರಂಗ ಹರಾಜು
ಯಾರು ಅರ್ಜಿ ಸಲ್ಲಿಸಬಹುದು?
ಕೃಷಿ (Agriculture ) ಮತ್ತು ಕೃಷಿ ಸಂಬಂಧಿತ ವಿಜ್ಞಾನ Agri related science)ದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ವ್ಯವಸ್ಥಾಪಕ ಅಥವಾ ಮೇಲ್ವಿಚಾರಣಾ ಸಾಮಥ್ಯ೯ದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
READ|ಹಾಲಿನ ದರ ಹೆಚ್ಚಳ! ಪರಿಷ್ಕೃತ ದರ ಹೀಗಿದೆ
ನೇಮಕಾತಿ ಹೇಗೆ?
ಅಭ್ಯರ್ಥಿ ಆಯ್ಕೆಯು ಜಿಲ್ಲಾ ಮಟ್ಟದ ನೇಮಕಾತಿ ಸಮಿತಿ ಮೂಲಕ ಮಾಡಲಾಗುವುದು. ಅಭ್ಯರ್ಥಿಗಳು ಛಾಯಾಚಿತ್ರ ಲಗತ್ತಿಸಿದ ವೈಯಕ್ತಿಕ ಮಾಹಿತಿ, ವಿದ್ಯಾರ್ಹತೆ, ಅನುಭವ ಪ್ರಮಾಣ ಪತ್ರ, ನಡತೆ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆಧಾರ ಪ್ರತಿಗಳ ದೃಢೀಕೃತ ದಾಖಲಾತಿಗಳನ್ನು ನವೆಂಬರ್ 28 ರೊಳಗಾಗಿ ಧಾರವಾಡ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.